ಮೊದಲ ಹಂತದಲ್ಲಿ 10 ನೇ ತರಗತಿ ವರೆಗೆ ಶಾಲೆ ಆರಂಭ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಹಿಜಾಬ್ – ಕೇಸರಿ ಸಂಘರ್ಷದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೊದಲ ಹಂತದಲ್ಲಿ ಹೈಸ್ಕೂಲ್ ವಿಭಾಗದ ತರಗತಿಯನ್ನು ಸೋಮವಾರದಿಂದ ಆರಂಭಿಸಲಾಗುವುದೆಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

- Advertisement -

ಇಂದು ಸಂಜೆ ನಡೆದ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು ಮೊದಲ ಹಂತದಲ್ಲಿ ಸೋಮವಾರದಿಂದ 10 ತರಗತಿಯ ವರೆಗೆ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

ಪಿಯುಸಿ ಮತ್ತು ಡಿಗ್ರಿ ಕಾಲೇಜು ಪ್ರಾರಂಭಿಸುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರು, ಉನ್ನತ ಶಿಕ್ಷಣ ಸಚಿವ ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಕಾಲೇಜು ಪ್ರಾರಂಭಿಸುವ ಕುರಿತು ನಿರ್ಧರಿಸಲಾಗುವುದೆಂದು ತಿಳಿಸಿದರು.



Join Whatsapp