ಹಿಜಾಬ್ ಪ್ರಕರಣ: ನನಗೆ ಜೀವ ಬೆದರಿಕೆ ಇದೆ ಎಂದ ಶಾಸಕ ರಘುಪತಿ ಭಟ್

Prasthutha|

ಉಡುಪಿ: ಹಿಜಾಬ್ ಪ್ರಕರಣ ಸಂಬಂಧಪಟ್ಟಂತೆ ನನಗೆ ವಿದೇಶಗಳಿಂದ ಹಾಗೂ ಸ್ಥಳೀಯ ಕೆಲ ನಂಬರ್‌ಗಳಿಂದ ನಿರಂತರವಾಗಿ ಇಂಟರ್ನೆಟ್ ಕಾಲ್ ಮಾಡಿ ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ. ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ, ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

- Advertisement -

ಈ ಕುರಿತು ಗೃಹಸಚಿವರಿಗೆ ಮೌಖಿಕವಾಗಿ ಮಾಹಿತಿ ನೀಡಿರುವ ರಘುಪತಿ ಭಟ್, ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ. ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ. ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ವಿದೇಶ ಸ್ಥಳೀಯ ಕೆಲ ನಂಬರ್ ಗಳಿಂದ ನಿರಂತರ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಇಂತಹ ಹಲವು ಬೆದರಿಕೆಗಳನ್ನು ನೋಡಿದ್ದೇವೆ. ಉಡುಪಿ ಜಿಲ್ಲೆಯ ಮುಸಲ್ಮಾನರ ಒಂದೂ ಪ್ರತಿರೋಧ ಬಂದಿಲ್ಲ. ಉಡುಪಿ ಬೆಂಗಳೂರಿನ ಮುಸಲ್ಮಾನರು ನನ್ನ ಬೆಂಬಲಕ್ಕಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಫೋನ್ ಮಾಡಿ ವಿಚಾರಿಸಿದ್ದಾರೆ ಎಂದರು.



Join Whatsapp