ಶಾಲಾ ಮಕ್ಕಳಿಗೆ ಕೇಸರಿ ಶಲ್ಯ ವಿತರಿಸುತ್ತಿರುವ ಮತ್ತೊಂದು ವೀಡಿಯೋ ವೈರಲ್

Prasthutha|

►ಪುಟಾಣಿ ಮಕ್ಕಳ ಮನಸಲ್ಲೂ ದ್ವೇಷ ತುಂಬಿಸಿದ ಬಜರಂಗದಳ ಮತ್ತು ದುರ್ಗಾವಾಹಿನಿ

- Advertisement -

ಮಡಿಕೇರಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಲ್ಯ ವಿವಾದ ನಡೆಯುತ್ತಿರುವ ಸಂದರ್ಭದಲ್ಲೇ ಪುಟಾಣಿ ಮಕ್ಕಳು ಸೇರಿದಂತೆ ವಿದ್ಯಾರ್ಥಿಗಳಿಗೆ ಸಂಘಪರಿವಾರ ಕೇಸರಿ ಶಲ್ಯ ವಿತರಿಸುತ್ತಿರುವ ವೀಡಿಯೋ ವೈರಲ್ ಆಗಿದೆ.

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ ಎಂಬಲ್ಲಿ ಬಜರಂಗದಳ ಮತ್ತು ದುರ್ಗಾವಾಹಿನಿಯ ಮುಖಂಡರು ಸೇರಿ ಪುಟ್ಟ ಮಕ್ಕಳ ಮನಸ್ಸಿಗೆ ದ್ವೇಷ ತುಂಬಿರುವ ಘಟನೆ ನಡೆದಿದ್ದು, ಕೋರ್ಟಿನ ಮಧ್ಯಂತರ ಆದೇಶ ಇದೆ. ಹಾಗಾಗಿ ಕೇಸರಿ ಶಲ್ಯವನ್ನು ಬ್ಯಾಗಿನಲ್ಲಿ ಇಡಿ. ಇಲ್ಲದಿದ್ದರೆ ಮನೆಯಲ್ಲಿಡಿ ಎಂದು ದುರ್ಗಾವಾಹಿನಿಯ ಮಹಿಳೆ ಒಬ್ಬರು ಹೇಳುತ್ತಿರುವುದು ವೀಡಿಯೋದಲ್ಲಿದೆ.

- Advertisement -

ಪುಟ್ಟ ಮಕ್ಕಳು ಸೇರಿದಂತೆ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿರುವ ಬಜರಂಗದಳ ಹಾಗೂ ದುರ್ಗಾವಾಹಿನಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



Join Whatsapp