ಕೊಡಗು: ಹುತಾತ್ಮ ಯೋಧನಿಗೆ ಅಂತಿಮ ನಮನ

Prasthutha|

►ಸೇನಾ ಧಿರಿಸಿನಲ್ಲಿ ಅಪ್ಪನಿಗೆ ಅಂತಿಮ ನಮನ ಸಲ್ಲಿಸಿದ ಯೋಧನ ಮಕ್ಕಳು

- Advertisement -

ವಿರಾಜಪೇಟೆ: ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗು ಮೂಲದ ಯೋಧ ಅಲ್ತಾಫ್ ಅಹಮದ್ ಅವರಿಗೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯ ಸಲ್ಲಿಸಲಾಯಿತು.

ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಶಾಸಕರು ಹಾಗೂ ಅಧಿಕಾರಿಗಳು ‌ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.

- Advertisement -

ಭಾರತೀಯ ಸೇನೆ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ 21 ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಕೆ ಮಾಡಲಾಯಿತು. ಸೇನೆಯಿಂದ DSC ವಿಭಾಗದಿಂದ ಗಾರ್ಡ್ ಆಫ್ ಹಾನರ್ ಸಲ್ಲಿಕೆ ಮಾಡಲಾಯಿತು. ಸೇನಾ ಸಮವಸ್ತ್ರದಲ್ಲಿ ತಂದೆಗೆ ನಮನ ಸಲ್ಲಿಸಿದ ಯೋಧನ ಮಕ್ಕಳು ಗೌರವ ವಂದನೆ ಬಳಿಕ ಅಲ್ತಾಫ್ ಕುಟುಂಬಕ್ಕೆ ಸೇನೆಯಿಂದ ತಿರಂಗ ಧ್ವಜ ಹಸ್ತಾಂತರ ಮಾಡಲಾಯಿತು.

ಅಲ್ತಾಫ್ ಅಹಮದ್ ಅವರ ಪತ್ನಿಗೆ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿದ ಸಂದರ್ಭದಲ್ಲಿ ಪತ್ನಿ ಭಾವುಕರಾದರು.



Join Whatsapp