ಮೇಕೆದಾಟು ಪಾದಯಾತ್ರೆ: ಡಿ.ಕೆ. ಶಿವಕುಮಾರ್ ಸೇರಿ 38 ಮಂದಿಯ ವಿರುದ್ಧ FIR

Prasthutha|

ರಾಮನಗರಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಸೇರಿ 38 ಮಂದಿ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪ್ರಕರಣದಲ್ಲಿ‌ ಮೊದಲ ಆರೋಪಿಯಾಗಿಸಲಾಗಿದೆ. ನಂತರದಲ್ಲಿ‌ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹಮ್ಮದ್, ಮುಹಮ್ಮದ್ ನಲಪಾಡ್ ಹ್ಯಾರಿಸ್, ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಎಂ.ಬಿ.‌ ಪಾಟೀಲ, ಯು.ಟಿ. ಖಾದರ್, ಕೆ.ಎಚ್. ಮುನಿಯಪ್ಪ , ಚಿತ್ರ ನಟರಾದ ಸಾಧುಕೋಕಿಲ, ನೆನಪಿರಲಿ ಪ್ರೇಮ್ ಮತ್ತಿತರರ ವಿರುದ್ಧ ರಾಮನಗರದ ಐಜೂರು ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.



Join Whatsapp