ರಷ್ಯಾ ದಾಳಿಗೆ ಕನ್ನಡಿಗ ವಿದ್ಯಾರ್ಥಿ ಬಲಿ: ಕೇಂದ್ರ ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

Prasthutha|

ಹಾವೇರಿ: ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಅವರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

- Advertisement -

ಈ ಸಂಬಂಧ ಮೃತ ನವೀನ್ ಮನೆಗೆ ದೌಡಾಯಿಸಿದ ನೂರಾರು ಜನರು ಹಾಗೂ ಸಂಬಂಧಿಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ರಷ್ಯಾ ಆಕ್ರಮಣಕ್ಕೆ ಭಾರಿ ಆಕ್ರೋಶ ವ್ಯಕ್ತಪಡಿಸಿದ ಜನರು, ವಿದೇಶಾಂಗ ಇಲಾಖೆ ವಿಫಲವಾಗಿದೆ. ನಮ್ಮ ಮಕ್ಕಳನ್ನು ಕರೆಸಿಕೊಳ್ಳಲು ಅವರು ಮುಂದಾಗಿಲ್ಲ ಎಂದು ಆರೋಪಿಸಿದ್ದಾರೆ. ಈಗ ನಮ್ಮ ಮಗ ಬಾರದಲೋಕಕ್ಕೆ ತೆರಳಿದ, ಇದಕ್ಕೆ ಯಾರು ಹೊಣೆ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.



Join Whatsapp