ತೆಲಂಗಾಣ: ಟೀಚರ್ ಹೊಡೆದರೆಂದು ಠಾಣೆಗೆ ಬಂದು ದೂರು ನೀಡಿದ 2ನೇ ತರಗತಿ ವಿದ್ಯಾರ್ಥಿ !

Prasthutha|

ಹೈದಾರಾಬಾದ್: ಎರಡನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕರು ಹೊಡೆದಿದ್ದು, ಸಂತ್ರಸ್ತ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ ಪ್ರಸಂಗ ತೆಲಂಗಾಣದಲ್ಲಿ ನಡೆದಿದೆ.

- Advertisement -

ಈ ಕುರಿತು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತನಗೆ ಹಲ್ಲೆ ನಡೆಸಿದ ಶಿಕ್ಷಕರ ವಿರುದ್ಧ ಪೊಲೀಸ್ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಈ ವೈರಲ್ ವೀಡಿಯೋಗೆ ಸಂಬಂಧಿಸಿದಂತೆ ನೆಟ್ಟಿಗರು ಪರ- ವಿರೋಧ ಚರ್ಚೆ ನಡೆಯುತ್ತಿದೆ, ಕೆಲವರು ಬಾಲಕನ ಮುಗ್ದತೆಯನ್ನು ಕೊಂಡಾಡಿದ್ದಾರೆ.

- Advertisement -

ತೆಲಂಗಾಣದ ಬಯ್ಯಾರಂ ಮಂಡಲದ ಖಾಸಗಿ ಶಾಲೆಯ ಎರಡನೆ ತರಗತಿಯ ವಿದ್ಯಾರ್ಥಿ ಅನಿಲ್ ಎಂಬಾತನೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಇನ್ಸ್ ಪೆಕ್ಟರ್ ಅವರಿಗೆ ದೂರು ನೀಡಿದ ವಿದ್ಯಾರ್ಥಿಯಾಗಿದ್ದು, ಶಿಕ್ಷಕರ ಕ್ರಮಕ್ಕೆ ಒತ್ತಾಯಿಸಿದ್ದಾನೆ.

ಮಹಿಳಾ ಅಧಿಕಾರಿಯೊಬ್ಬರು ಶಿಕ್ಷಕರು ಎಲ್ಲಿಗೆ ಹೊಡೆದಿದ್ದಾರೆ ಎಂದು ಪ್ರಶ್ನಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದ್ದು, ಕಾಲಿಗೆ ಹೊಡೆದಿದ್ದಾರೆ ಎಂದು ವಿದ್ಯಾರ್ಥಿ ಪ್ರತಿಕ್ರಿಯಿಸಿದ್ದಾನೆ.

ಈ ಮಧ್ಯೆ ವಿದ್ಯಾರ್ಥಿಗೆ ಹೊಡೆದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ವಿದ್ಯಾರ್ಥಿಗೆ ಭರವಸೆ ನೀಡಿದ್ದಾರೆ.



Join Whatsapp