ನಾನು ಜೀವಂತವಾಗಿ ಇರುವವರೆಗೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ: ದೇವೇಗೌಡ

Prasthutha|

ಮದ್ದೂರುಜೆಡಿಎಸ್‌ ಪಕ್ಷವನ್ನು ಮುಗಿಸಬೇಕು ಎಂದು ಹಲವು ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ಜೀವಂತವಾಗಿ ಇರುವವರೆಗೂ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

- Advertisement -

ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಅವರ ‘ಅಪರೂಪ’ ಅಭಿನಂದನಾ ಗ್ರಂಥಬಿಡುಗಡೆ ಮಾಡಿ ಅವರು ಮಾತನಾಡಿದರು. 1967ರಲ್ಲಿ ನಾನು ವಿಧಾನಸಭೆಗೆ ಬಂದೆ, ಅಂದಿನಿಂದ ಇಲ್ಲಿಯವರೆಗೂ ಹೋರಾಟದಲ್ಲೇ ಕಳೆದಿದ್ದೇನೆ. 10 ತಿಂಗಳು ಪ್ರಧಾನಿ, ಮುಖ್ಯಮಂತ್ರಿ, ನೀರಾವರಿ ಮಂತ್ರಿಯಾಗಿ 2 ಬಾರಿ ರಾಜೀನಾಮೆ ನೀಡಿದ್ದೇನೆ. ಯಾರು ಎಷ್ಟೇ ಪ್ರಯತ್ನಿಸಿದರೂ ನನ್ನ ಹೋರಾಟದ ಬದುಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ನನ್ನ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದರು. ಎಚ್‌.ಡಿ.ಕುಮಾರಸ್ವಾಮಿ ಹಾಗೂ ನನನ್ನು ರಾಜಕೀಯವಾಗಿ ಮುಗಿಸಲು ಹಲವರು ಪ್ರಯತ್ನ ನಡೆಸಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.



Join Whatsapp