ಉಳ್ಳಾಲ: SDPI ಮಂಗಳೂರು ಅಸೆಂಬ್ಲಿ ಸಮಿತಿಯ ನೂತನ ಪದಾಧಿಕಾರಿಗಳಿಗೆ ಪದಗ್ರಹಣ

Prasthutha|

ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಅಸೆಂಬ್ಲಿ ಸಮಿತಿಯ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವು ಪಕ್ಷದ ದೇರಳಕಟ್ಟೆ ಕಚೇರಿಯಲ್ಲಿ ನಡೆಯಿತು.

- Advertisement -

ಮಂಗಳೂರು ಕ್ಷೇತ್ರಾಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅಥಿತಿಯಾಗಿ ಆಗಮಿಸಿದ SDPI ರಾಜ್ಯ ಕಾರ್ಯದರ್ಶಿ ನೆರೆದವರನ್ನುದ್ದೇಶಿಸಿ ಮಾತನಾಡಿ, ಎಸ್.ಡಿ.ಪಿ.ಐ ಪಕ್ಷವು ದೇಶದ ದಮನಿತ ಸಮುದಾಯಗಳ ರಕ್ಷಣೆಗಾಗಿ ಮತ್ತು ಸಾಂವಿಧಾನಾತ್ಮಕವಾಗಿ ಅವರಿಗೆ ಸಿಗಬೇಕಾದ ಹಕ್ಕುಗಳಿಗಾಗಿ ಹೋರಾಡುತ್ತಿದ್ದು, ಪಕ್ಷದತ್ತ ಹೊಸ ತಲೆಮಾರಿನ ಜನತೆ ಆಕರ್ಷಿತರಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ದೇಶದ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿದ್ದು ಸರ್ಕಾರ ಇವರ ನೆರವಿಗೆ ಬರುತ್ತಿಲ್ಲ. ಎಸ್.ಡಿ.ಪಿ.ಐ ಸರ್ಕಾರಗಳ ಇಂತಹ ದ್ವಿಮುಖ ಧೋರಣೆಯನ್ನು ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

- Advertisement -

ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳಾಗಿ ಅಬ್ದುಲ್ ಲತೀಫ್ ಕೋಡಿಜಾಲ್ (ಕೋಶಾಧಿಕಾರಿ), ನಾಮ ನಿರ್ದೇಶನ ಸದಸ್ಯರಾಗಿ ಅಶ್ರಫ್ ಮೋನು ಬೋಳಿಯಾರು, ಸಹೈಲ್ ಉಳ್ಳಾಲ ಅವರನ್ನು ಆಯ್ಕೆ ಮಾಡಲಾಯಿತು. ಇದೇ ವೇಳೆ ಮುನ್ನೂರು ಬ್ಲಾಕ್ ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ಬಶೀರ್ ಎಸ್.ಎಂ., ಕೊಣಾಜೆ ಬ್ಲಾಕ್ ಸಮಿತಿ ಅಧ್ಯಕ್ಷರಾಗಿ ಕಮರುದ್ದೀನ್ ಮಲಾರ್, ಸಜಿಪ ಬ್ಲಾಕ್ ಸಮಿತಿ ಕಾರ್ಯದರ್ಶಿಯಾಗಿ ಅಬ್ದುಲ್ಲಾ ಪರಪ್ಪು, ಹಲವು ಬ್ಲಾಕ್ ಮತ್ತು ಗ್ರಾಮ ಸಮಿತಿ ಪದಾಧಿಕಾರಿಗಳನ್ನು ಆಯ್ಕೆಗೊಳಿಸಿ, ಪದಗ್ರಹಣ ನಡೆಸಲಾಯಿತು.

ಪ್ರಸಕ್ತ ಸಭೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಅಶ್ರಫ್ ಮಂಚಿ, ಕಾರ್ಯದರ್ಶಿ ಝಾಹಿದ್ ಮಲಾರ್, ಜೊತೆ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ, ಪಾವೂರು ಗ್ರಾಪಂ ಉಪಾಧ್ಯಕ್ಷ ಅನ್ಸಾರ್ ಇನೋಳಿ, ಮಂಜನಾಡಿ ಗ್ರಾಪಂ ಸದಸ್ಯ ನೌಷಾದ್ ಕಲ್ಕಟ್ಟ ಉಪಸ್ಥಿತರಿದ್ದರು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News



Join Whatsapp