ಧೈರ್ಯವಿದ್ದರೆ ನಮ್ಮೊಂದಿಗೆ ಹೋರಾಡಿ ಎಂದು ಬಿಜೆಪಿಗೆ ಸವಾಲು ಹಾಕಿದ ದೆಹಲಿ ಉಪ ಮುಖ್ಯಮಂತ್ರಿ

Prasthutha|

ನವದೆಹಲಿ: ಕಾಂಗ್ರೆಸ್‍ ಪಕ್ಷದಂತೆ ಅಳುವುದನ್ನು ನಿಲ್ಲಿಸಿ. ನಿಮಗೆ ಧೈರ್ಯವಿದ್ದರೇ ಓಡಿಹೋಗದೆ ನಮ್ಮೊಂದಿಗೆ ಹೋರಾಡಿ ಎಂದು ಬಿಜೆಪಿಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸವಾಲು ಹಾಕಿದ್ದಾರೆ.

- Advertisement -

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ) ಚುನಾವಣೆಯ ವಿಳಂಬದ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಎಂಸಿಡಿ ಚುನಾವಣೆಗೆ ಸ್ಪರ್ಧಿಸಿ, ನಮ್ಮೊಂದಿಗೆ ಹೋರಾಡಿ. ನೀವು 10 ಸ್ಥಾನಗಳನ್ನು ಗಳಿಸಲು ಸಾಧ್ಯವಾದರೆ ಅದು ನಿಮ್ಮ ದೊಡ್ಡ ಸಾಧನೆಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆಗಳನ್ನು ಮುಂದೂಡಿದ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ಕೇಂದ್ರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದರು.



Join Whatsapp