ಕಾಂಗ್ರೆಸ್ ತೊರೆದಿದ್ದ ಯು.ಟಿ. ಖಾದರ್ ಆಪ್ತ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

Prasthutha|

ಮಂಗಳೂರು: ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರ ಆಪ್ತ ವಲಯದಲ್ಲಿ ಗುರುತಿಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಪ್ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ತೊರೆದು ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

- Advertisement -

ಇಂದು ಮಂಗಳೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಬಿಜೆಪಿ ರಾಜಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಇನ್ನಿತರ ಬೆಂಬಲಿಗರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದೆಯೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಉಚ್ಚಾಟಿಸಿರುವುದಾಗಿ ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದ್ದು, ಶನಿವಾರ ಪತ್ರಿಕಾಗೋಷ್ಠಿ ಕರೆದ ಸಂತೋಷ್ ಕುಮಾರ್ ಶೆಟ್ಟಿ ಅವರು ಶಾಸಕರಾದ ಯು.ಟಿ. ಖಾದರ್ ವಿರುದ್ದ ಸಾಕಷ್ಟು ಆರೋಪವನ್ನು ಹೊರಿಸಿದ್ದರು. ಈ ವೇಳೆ ಶಾಸಕ ಯು.ಟಿ. ಖಾದರ್ ಅವರ ಕಾರ್ಯವೈಖರಿಯಿಂದ ಬೇಸತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುಯಾಗುವುದಾಗಿ ಘೋಷಿಸಿದ್ದರು.

- Advertisement -

ಶಾಸಕರಾದ ಯು.ಟಿ.ಖಾದರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂತೋಷ್ ಕುಮಾರ್ ಶೆಟ್ಟಿ ಅವರು ಏಕಾಏಕಿ ಕಾಂಗ್ರೆಸ್ ತೊರೆಯುತ್ತಿರುವುದು ಕ್ಷೇತ್ರದಾದ್ಯಂತ ಸಾಕಷ್ಟು ಸಂಚಲನ ಮೂಡಿಸಿತ್ತು.

Join Whatsapp