ರಾಜಕೀಯ ದುರುದ್ದೇಶದಿಂದ ಇಂದಿರಾ ಕ್ಯಾಂಟೀನ್ ಗೆ ಅನುದಾನ ಸ್ಥಗಿತಗೊಳಿಸಿರುವುದು ಹೀನ ಬುದ್ದಿ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಇಂದಿರಾ ಕ್ಯಾಂಟೀನ್ ಗೆ ಅನುದಾನ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಬಡವರಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದ್ದ ಊಟಕ್ಕೂ ಕಲ್ಲು ಹಾಕುತ್ತಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

- Advertisement -

   ಇಂದಿರಾ ಕ್ಯಾಂಟೀನ್ಗೆ ಅನುದಾನ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರ, ಬಡವರಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದ್ದ ಊಟಕ್ಕೂ ಕಲ್ಲು ಹಾಕುತ್ತಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮಗೆ ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ನ ಕೊಡುಗೆ ಎನ್ನುವ ಕಾರಣಕ್ಕೆ ಅನುದಾನ ನಿಲ್ಲಿಸಿದಿರೋ ಅಥವಾ ಬಡವರ ಮೇಲೆ ನಿಷ್ಕಾಳಜಿಯಿಂದ ಅನುದಾನ ಸ್ಥಗಿತಗೊಳಿಸಿದ್ದೀರಾ ಎಂದು ಪ್ರಶ್ನಿಸಿದರು.

ಸರ್ಕಾರದ ಅನುದಾನವಿಲ್ಲದ ಕಾರಣ ಇಂದಿರಾ ಕ್ಯಾಂಟೀನ್ನಲ್ಲಿ ಗುಣಮಟ್ಟದ ಆಹಾರ ಸಿಗುತ್ತಿಲ್ಲ. ಹೀಗಾಗಿ ಕ್ಯಾಂಟೀನ್ ಗೆ ಜನ ಬರುತ್ತಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ರಾಜ್ಯ ಸರ್ಕಾರ ಕ್ಯಾಂಟೀನ್ ಗೆ ಅನುದಾನ ಸ್ಥಗಿತಗೊಳಿಸಿರುವುದು ಹೀನ ಬುದ್ದಿ. ಈ ಸರ್ಕಾರಕ್ಕೆ ಬಡವರ ಮೇಲೆ ನೈಜ ಕಾಳಜಿಯಿದ್ದರೆ ಇಂದಿರಾ ಕ್ಯಾಂಟೀನ್ಗೆ ಅನುದಾನ ನೀಡಲಿ ಎಂದು ಅವರು ತಿಳಿಸಿದ್ದಾರೆ.



Join Whatsapp