ಮುಜರಾಯಿ ದೇವಸ್ಥಾನಗಳನ್ನು ಖಾಸಗಿಯವರಿಗೆ ಹಸ್ತಾಂತರ ಮಾಡುವ ಪ್ರಸ್ತಾವನೆ ಇಲ್ಲ: ಆರ್. ಅಶೋಕ

Prasthutha|

ಬೆಂಗಳೂರು: ಮುಜರಾಯಿ ದೇವಸ್ಥಾನಗಳನ್ನು ಖಾಸಗಿಯವರಿಗೆ ಹಸ್ತಾಂತರ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು.

- Advertisement -

ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರ ಪರವಾಗಿ ಉತ್ತರಿಸಿದ ಸಚಿವರು, ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಕುರಿತು ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಲಾಗುವುದು ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ ಸಕ್ರಮ ಯೋಜನೆಯಡಿ ಶೀಘ್ರದಲ್ಲೇ ಸಮಿತಿ ರಚಿಸಿ ಸಾಗುವಳಿದಾರರಿಗೆ ಭೂ ಮಂಜೂರಾತಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

- Advertisement -

ರಾಜ್ಯದ ಯಾವುದೇ ಭಾಗದಲ್ಲಿ ಜಾತಿ ಸೂಚಕ ಗ್ರಾಮಗಳನ್ನು ತೆಗೆದು ಹಾಕಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಸನಗೌಡ ತುರುವಿ ಹಾಳ್ ಅವರ  ಪ್ರಶ್ನೆಗೆ ಆರ್. ಅಶೋಕ ಉತ್ತರಿಸಿದರು.

ರಾಜ್ಯಾದ್ಯಂತ ಹೊಸದಾಗಿ  100 ಪಶು ಆಸ್ಪತ್ರೆಗಳನ್ನು ತೆರೆಯಲು  ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ  ಪ್ರಭು ಚವ್ಹಾಣ್ ಸದನಕ್ಕೆ ತಿಳಿಸಿದರು.



Join Whatsapp