ದೆಹಲಿ ಗಲಭೆಗೆ ಪಿತೂರಿ ಪ್ರಕರಣ: ಮಾಜಿ ಕಾಂಗ್ರೆಸ್ ಕೌನ್ಸಿಲರ್ ಇಶ್ರತ್ ಜಹಾನ್’ಗೆ ಜಾಮೀನು

Prasthutha|

ನವದೆಹಲಿ: ದೆಹಲಿ ಗಲಭೆಗೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧಿತರಾದ ಕಾಂಗ್ರೆಸ್ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

- Advertisement -

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26, 2020 ರಂದು ಅವರನ್ನು ಬಂಧಿಸಲಾಗಿತ್ತು.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಕಳೆದ ತಿಂಗಳು ಆದೇಶಗಳನ್ನು ಕಾಯ್ದಿರಿಸಿದ ನಂತರ ಇಶ್ರತ್‌ಗೆ ಜಾಮೀನು ಮಂಜೂರು ಮಾಡಿದರು.

- Advertisement -

ಇಶ್ರತ್ ಜಹಾನ್ ಪರವಾಗಿ ವಕೀಲ ಪ್ರದೀಪ್ ತಿಯೋಟಿಯಾ ವಾದ ಮಂಡಿಸಿದರೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದರು.



Join Whatsapp