ಸಮಾಜವನ್ನು ಹಾಳುಮಾಡುವುದೇ ಬಿಜೆಪಿಯ ಅಜೆಂಡಾ: ಎಚ್ ಡಿ ಕುಮಾರಸ್ವಾಮಿ

Prasthutha|

ಮಂಡ್ಯ: ಸಮಾಜವನ್ನು ಹಾಳುಮಾಡುವುದೇ ಬಿಜೆಪಿಯ ಅಜೆಂಡಾ ಎಂದು ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಭಗವದ್ಗೀತೆ ತಲೆ ತುಂಬುತ್ತೆಂದು ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ನಾನು ರಾಮಾಯಣ, ಮಹಾಭಾರತವನ್ನು ಓದಿದ್ದೇನೆ. ನಾನು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದೇನೆ. ಆದರೆ ಬಿಜೆಪಿ ದ್ವೇಷ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಇಂತಹ ಗುಣ ತಲೆಗೆ ತುಂಬಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಯವರಿಂದ ನಾನು ತಿಳಿದುಕೊಳ್ಳಬೇಕಾದ ಅಗತ್ಯವಿಲ್ಲ. ಅಂತಹವರಿಂದ ಕಲಿತರೆ ಸಮಾಜ ಹಾಳಾಗುತ್ತದೆ ಎಂದು ಹೇಳಿದ್ದಾರೆ.  



Join Whatsapp