ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದೇ ಕಾಂಗ್ರೆಸ್: ಸಚಿವ ಆರ್.ಅಶೋಕ್

Prasthutha|

ಬೆಂಗಳೂರು: ಹಿಜಾಬ್ ವಿವಾದ ಕಾಂಗ್ರೆಸ್ ಪಕ್ಷದ ಕೂಸು. ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದೇ ಕಾಂಗ್ರೆಸ್ ನಾಯಕರು ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ.

- Advertisement -

ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ನಾಯಕರು ಇದ್ದಾರೆ. ವೋಟ್ ಬ್ಯಾಂಕ್ ಗೆ ಅಲ್ಪಸಂಖ್ಯಾತರನ್ನು ಬಳಸಿಕೊಳ್ಳುತ್ತಾರೆ. ಅಲ್ಪ ಸಂಖ್ಯಾತರಿಗೆ ಯಾವ ಅನುಕೂಲವನ್ನೂ ಕಾಂಗ್ರೆಸ್ ಮಾಡಿಲ್ಲ. ಶಾಲೆಗೆ ಯಾರೇ ಬಂದರೂ ಹಿಜಾಬ್ ತೆಗೆದಿಟ್ಟು ಬರಬೇಕು ಎಂದು ಹೇಳಿದರು.

ಇನ್ನು ಸ್ವಾಮೀಜಿಗಳು ಸಹ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ , ಸಿದ್ಧರಾಮಯ್ಯ ಸ್ವಾಮೀಜಿಗಳ ಕ್ಷಮೆಯಾಚಿಸಬೇಕು. ಸಿದ್ದರಾಮಯ್ಯ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.



Join Whatsapp