ಬಂಟ್ವಾಳ: ಕೋಳಿ ಮರಿಯನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು

Prasthutha|

ಬಂಟ್ವಾಳ: ಕೋಳಿ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವ ಬಾವಿಗೆ ಬಿದ್ದು  ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಮದರಮೂಲೆಯಲ್ಲಿ ನಡೆದಿದೆ.

- Advertisement -

ವಿಟ್ಲ ಠಾಣಾ ವ್ಯಾಪ್ತಿಯ ಕರೋಪಾಡಿ ಗ್ರಾಮದ ಮದರಮೂಲೆ ನಿವಾಸಿ ದಿ. ಮುದ್ದ ಮುಗೇರರ ಪುತ್ರ ವಸಂತ ಮುಗೇರ (37) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.

ಉಪ್ಪಳದ ವಿದ್ಯುತ್ ಗುತ್ತಿಗೆದಾರರ ಕಾರ್ಮಿಕರಾಗಿದ್ದ ವಸಂತ ಕೇರಳದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ಮುಷ್ಕರದಿಂದಾಗಿ ರಜೆಯಲ್ಲಿದ್ದರು. ಶನಿವಾರ ಸಂಜೆ 4 ಗಂಟೆಯ ಸುಮಾರಿಗೆ ಮನೆ ಮುಂದಿನ 70 ಅಡಿ ಆಳದ ಬಾವಿಗೆ ಬಿದ್ದ ಕೋಳಿ ಮರಿಯನ್ನು ರಕ್ಷಿಸಲು ಮುಂದಾಗಿದ್ದರು. ಹಗ್ಗ ಕಟ್ಟಿದ ಬುಟ್ಟಿಯನ್ನು ಬಾವಿಗೆ ಇಳಿಸುತ್ತಿದ್ದ ಸಂದರ್ಭ ಬಾವಿಯ ಕಟ್ಟೆ ಕುಸಿದು ವಸಂತ 70 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದರು



Join Whatsapp