ಮುಝಫರ್‌ನಗರ । ರೈತ ಮುಖಂಡ ರಾಕೇಶ್ ಟಿಕಾಯತ್’ಗೆ ಜೀವ ಬೆದರಿಕೆ ಕರೆ ; ದೂರು ದಾಖಲು

Prasthutha|

ಮುಜಾಫರ್‌ನಗರ: ರೈತರ ಮುಖಂಡ ರಾಕೇಶ್ ಟಿಕಾಯತ್’ಗೆ ಅಪರಿಚಿತ ವ್ಯಕ್ತಿಗಳು ಕರೆಗಳ ಮೂಲಕ ಜೀವ ಬೆದರಿಕೆ ಹಾಕಿ, ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್’ಗೆ ಜೀವ ಬೆದರಿಕೆ ಹಾಕಿ, ನಿಂದಿಸಿದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡನ ಚಾಲಕ ಪೆರ್ಜ್ವಲ್ ತ್ಯಾಗಿ ಅವರು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ಅಧೀಕ್ಷಕ ಅಭಿಷೇಕ್ ಯಾದವ್ ತಿಳಿಸಿದ್ದಾರೆ.

ಈ ಮಧ್ಯೆ ಸಬ್ ಇನ್ಸ್‌ಪೆಕ್ಟರ್ ರಾಕೇಶ್ ಶರ್ಮಾ ನೇತೃತ್ವದ ಪೊಲೀಸ್ ತಂಡ, ರಾಕೇಶ್ ಟಿಕಾಯತ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತನಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -



Join Whatsapp