ನರಗುಂದ ಸಮೀರ್ ಶಹಾಪುರ, ಸಂಶೀರ್ ನಿವಾಸಕ್ಕೆ ಎಸ್ ಡಿಪಿಐ ನಿಯೋಗ ಭೇಟಿ

Prasthutha|

ನರಗುಂದ: ಬಜರಂಗದಳದ ಕಾರ್ಯಕರ್ತರಿಂದ ಹತ್ಯೆಯಾದ ಸಮೀರ್ ಶಹಾಪುರ ಹಾಗೂ ತೀವ್ರ ಗಾಯಗೊಂಡ ಸಂಶೀರ್ ಅವರ ನಿವಾಸಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿಯೋಗ ಗುರುವಾರ ಭೇಟಿ ನೀಡಿ ಸಾಂತ್ವನ ಹೇಳಿತು.

- Advertisement -

 ಜನವರಿ 17ರಂದು ರಾತ್ರಿ  ನರಗುಂದಲ್ಲಿರುವ ತನ್ನ ಹೋಟೆಲ್ ಬಂದ್ ಮಾಡಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ನರಗುಂದ ನಿವಾಸಿ ಸಮೀರ್ ಶಹಾಪುರ (19) ಹಾಗೂ ಆತನ ಸ್ನೇಹಿತ ಸಂಶೀರ್  ಅವರ ಮೇಲೆ ಬಜರಂಗದಳದ ಕಾರ್ಯಕರ್ತರು ಮಾರಕಾಯುಧಗಳಿಂದ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಮೀರ್ ಶಹಾಪುರ ಮರುದಿನ ಬೆಳಗ್ಗೆ ಮೃತಪಟ್ಟಿದ್ದರು.  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಶೀರ್ ಇತ್ತೀಚೆಗೆ ಬಿಡುಗಡೆಯಾಗಿದ್ದರು.

ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ಟಿಪ್ಪು ಸುಲ್ತಾನ್ ಸಂಘರ್ಷ ಸಮಿತಿ ಕಲಂದರ್ ಸೇರಿದಂತೆ ಹಲವು ಮುಖಂಡರು ನಿಯೋಗದಲ್ಲಿದ್ದರು.



Join Whatsapp