ಶಿವಮೊಗ್ಗ ಹರ್ಷ ಕೊಲೆ: ಸಚಿವ ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ

Prasthutha|

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷ ಕೊಲೆಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್‌ ಎನ್‌  ಚನ್ನಬಸಪ್ಪ ನೀಡಿರುವ ಹೇಳಿಕೆ ಕೋಮುದ್ವೇಷವನ್ನು ಪ್ರಚೋದಿಸಿದೆ ಎಂದು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

- Advertisement -

ಬೆಂಗಳೂರಿನ  ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿವಮೊಗ್ಗದ ಪೀಸ್ ಸಂಘಟನೆಯ ಕಾರ್ಯಕರ್ತ ಹಾಗೂ ನಿವಾಸಿ ರಿಯಾಜ್‌ ಅಹ್ಮದ್‌ ಎಂಬವರು ಇಬ್ಬರು ನಾಯಕರ ವಿರುದ್ಧ ಮಾ.30 ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಹರ್ಷ ಕೊಲೆಯ ಪ್ರಕರಣದ ನಂತರದ ಬೆಳವಣಿಗೆಯನ್ನು ಉಲ್ಲೇಖಿಸಲಾಗಿದೆ.

ಪೊಲೀಸ್‌ ಇಲಾಖೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದ ಈಶ್ವರಪ್ಪ ಹಾಗೂ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಬುಧವಾರ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ನಿರ್ದೇಶಿಸಿದೆ.



Join Whatsapp