ಬಾಲ್ಯ ವಿವಾಹದ ಬಳಿಕ ತಾಳಿ ಬಿಚ್ಚಿ ಪರೀಕ್ಷೆಗೆ ಹಾಜರಾಗಿ ಸಿಕ್ಕಿಬಿದ್ದ ವಿದ್ಯಾರ್ಥಿನಿ

Prasthutha|

ಮಂಡ್ಯ: ಬಾಲ್ಯ ವಿವಾಹ ಮಾಡಿದ ಬಳಿಕ ತಾಳಿ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕಳುಹಿಸಿದ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

- Advertisement -

ಕಳೆದ ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ನಡೆದಿದೆ. 28ರಂದು ತಾಳಿ, ಕಾಲುಂಗುರ ಬಿಚ್ಚಿಸಿಕೊಂಡು ಪಾಲಕರು ಪರೀಕ್ಷೆ ಬರೆಯಲು ಕಳುಹಿಸಿದ್ದರು.

ಪರೀಕ್ಷೆ ಬರೆಯಲು ಹೋದಾಗ ವಿದ್ಯಾರ್ಥಿನಿ ಸ್ನೇಹಿತೆ ಬಳಿ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿದ್ದಾಳೆ.

- Advertisement -

ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ದೂರು ನೀಡಲಾಗಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಂಡ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಾಲ್ಯ ವಿವಾಹ ಮಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಅಧಿಕಾರಗಳು ಎಚ್ಚರಿಕೆ ನೀಡಿದ್ದರು.

ಮಾರ್ಚ್ 18 ಮತ್ತು 25 ರಂದು ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಕದ್ದು ಮುಚ್ಚಿ ವಿವಾಹ ಮಾಡಿದ್ದಾರೆ ಎನ್ನಲಾಗಿದೆ.



Join Whatsapp