ಕಾಂಗ್ರೆಸ್ ಪಕ್ಷ ಮಾತ್ರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯ: ಡಿ ಕೆ ಶಿವಕುಮಾರ್

Prasthutha|

ಬೆಂಗಳೂರು: ಈ ದೇಶವನ್ನು ಕಾಂಗ್ರೆಸ್ ಪಕ್ಷದಿಂದ ಮಾತ್ರ ಒಗ್ಗೂಡಿಸಲು ಸಾಧ್ಯ. ಕಾಂಗ್ರೆಸ್ ಪಕ್ಷ ಮಾತ್ರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ನಗರದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,  ನಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ರಾಜ್ಯದ ಜನರ ಸೇವೆ ಮಾಡಲು ನನಗೆ ಅವರು ದೊಡ್ಡ ಶಕ್ತಿ ತುಂಬಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

ಇದೊಂದು ಸುದಿನ. ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ್ದಾರೆ. ಆ ಮೂಲಕ ಕರ್ನಾಟಕ ರಾಜ್ಯ ರಾಜಕೀಯಕ್ಕೆ ಒಂದು ಸರಿಯಾದ ಸಂದೇಶ ರವಾನಿಸಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಕೂಡ ಮಠ ಮಾನ್ಯಗಳಿಗೆ ಈ ಹಿಂದೆಯೂ ಗೌರವ ಸಮರ್ಪಿಸಿದ್ದಾರೆ ಅಭಿಮಾನ ವ್ಯಕ್ತಪಡಿಸಿದರು.

- Advertisement -

ಕಳೆದ ಎರಡು ವರ್ಷಗಳಿಂದ ನಾವು ಏನೆಲ್ಲ ಕೆಲಸ ಮಾಡಿದ್ದೇವೋ ಅದು ಕೇವಲ ಡಿ.ಕೆ. ಶಿವಕುಮಾರ್ ನಿಂದ ಮಾತ್ರ ಸಾಧ್ಯವಾಗಿಲ್ಲ. ಎಲ್ಲರೂ ಒಟ್ಟಾಗಿ ಸೇರಿ ಶ್ರಮಿಸಿದ ಕಾರಣಕ್ಕೆ ನಾವು ಪ್ರಗತಿಯತ್ತ ಹೆಜ್ಜೆ ಇಟ್ಟಿದ್ದೇವೆ. ನೀವೆಲ್ಲರೂ ನನಗೆ ತೋರಿದ ಪ್ರೀತಿ ವಿಶ್ವಾಸ, ಕೊಟ್ಟ ಶಕ್ತಿ ಮರೆಯಲು ಸಾಧ್ಯವಿಲ್ಲ. ನಾನು ಎಂದಿಗೂ ವ್ಯಕ್ತಿ ಪೂಜೆ ಮಾಡಿಲ್ಲ. ನಾನು ಪಕ್ಷ ಪೂಜೆಯನ್ನು ಮಾಡಿದ್ದೇನೆ. ಪಕ್ಷ ಇದ್ದರೆ ನಾವು ಎಂದು ನಂಬಿದ್ದೇನೆ ಎಂದು ಹೇಳಿದರು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News



Join Whatsapp