ತುಂಬು ಗರ್ಭಿಣಿಯ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಕರವೇ ಮನವಿ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಆಲೂರು ಗ್ರಾಮ ಪಂಚಾಯಿತಿಯ ಮೆಣಸ ಗ್ರಾಮದ ಷಣ್ಮುಖ ಎಂಬುವವರ ಮನೆಗೆ ಪಂಚಾಯಿತಿಯಿಂದ ನೀರು ಬರದೆ 5 ವರ್ಷಗಳು ಕಳೆದಿದೆ. ಅಲ್ಲದೆ ಸದ್ಯ ಷಣ್ಮುಖ ಕುಟುಂಬದಲ್ಲಿ 8 ತಿಂಗಳ ತುಂಬು ಗರ್ಭಿಣಿ ಸಹ ಇದ್ದು ನೀರಿ ಇಲ್ಲದೆ ಪರದಾಡುತ್ತಿದ್ದಾರೆ. ಇದನ್ನು ತಿಳಿದು ಕರವೇ ಕಾರ್ಯಕರ್ತರು ಅಲೂರು ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದರು.

- Advertisement -


ಇದೇ ಸಂದರ್ಭದಲ್ಲಿ ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಕಾರ್ಯಕರ್ತರು, ಸರ್ಕಾರದಿಂದ ನೀರಿನ ವ್ಯವಸ್ಥೆಗೆ ಲಕ್ಷಗಟ್ಟಲೆ ಹಣ ಹರಿದು ಬಂದರೂ ಗ್ರಾಮ ಪಂಚಾಯಿತಿ ಯವರು ಏನು ಮಾಡುತ್ತಿದ್ದಾರೆ. ಇಷ್ಟು ವರ್ಷದವರೆಗೂ ಈ ಕುಟುಂಬದವರು ತುಂಬಾ ದೂರದಿಂದಲೇ ನೀರನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುಟುಂಬದಿಂದ ಆಲೂರು ಪಂಚಾಯಿತಿಯವರಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನ ಕಾಂಡಿಲ್ಲ. ಹಾಗಾಗಿ ಕುಟುಂಬದಿಂದ ಕರ್ನಾಟಕ ರಕ್ಷಣಾ ವೇದಿಕೆಯ ಮೊರೆ ಬಂದಿದ್ದಾರೆ ಎಂದು ಅಸಮದಾನ ವ್ಯಕ್ತ ಪಡಿಸಿದರು.


ಸದ್ಯ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಈ ಖುದ್ದಾಗಿ ಈ ಕುಟುಂಬವನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಷಣ್ಮುಖ ಅವರ ಜತೆ ಆಲೂರು ಗ್ರಾಮ ಪಂಚಾಯಿತಿಗೆ ಹೋಗಿ ಮನವಿ ಪತ್ರವನ್ನು ಸಲ್ಲಿಸಿದರು.
ಆಲೂರು ಪಂಚಾಯಿತಿಯವರು ನೊಂದ ಕುಟುಂಬದವರಿಗೆ ನೀರಿನ ವ್ಯವಸ್ಥೆ ಮಾಡ ಕೊಡಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ .ಈ ಮನವಿಗೆ ಸ್ಪಂದಿಸದೇ ಹೋದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಲೂರು ಪಂಚಾಯಿತಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದರು.



Join Whatsapp