ನುಗ್ಗಿಕೇರಿ ಅಂಗಡಿ ಧ್ವಂಸ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

Prasthutha|

ಬೆಂಗಳೂರು: ಧಾರವಾಡ ಜಿಲ್ಲೆಯ  ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಬಳಿ ಮುಸ್ಲಿಂ ವ್ಯಾಪಾರಿ ನಬಿಸಾಬ್ ಅವರ ಕಲ್ಲಂಗಡಿ ಹಣ್ಣಿನ ಅಂಗಡಿ ಸಹಿತ ಇತರ ಮುಸ್ಲಿಮರ ಅಂಗಡಿಗಳನ್ನು ಧ್ವಂಸಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಕಲ್ಲಂಗಡಿ ಹಣ್ಣನ್ನು ರಸ್ತೆಗೆ ಚೆಲ್ಲಿ, ಒಡೆದು ಹಾಕಿದ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೀಗ ಆರೋಪಿಗಳಾದ ಚಿದಾನಂದ ಕಲಾಲ (25), ಮಹಾನಿಂಗ ಐಗಳಿ (26), ಕುಮಾರ ಕಟ್ಟಿಮನಿ (26), ಮೈಲಾರಪ್ಪ ಗುಡ್ಡಪ್ಪನವರ್ (27) ಎಂಬವರನ್ನು ಧಾರವಾಡ  ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

ಕೆಲವು ರಾಜಕೀಯ ನಾಯಕರು ನುಗ್ಗಿಕೇರಿಗೆ ಭೇಟಿ ನೀಡಿ ನಷ್ಟಕ್ಕೊಳಗಾದ ವ್ಯಾಪಾರಿಗಳಿಗೆ ಸಾಂತ್ವನ ಹೇಳಿ, ಧನ ಸಹಾಯ ನೀಡಿದ್ದಾರೆ.



Join Whatsapp