ಪೂರಿ-ಬಾಜಿಯಲ್ಲಿ ಬೆಂದ ಹಲ್ಲಿ: 90 ಸಾವಿರ ರೂ. ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Prasthutha|

ಧಾರವಾಡ: ಇಲ್ಲಿನ ಕಾಮತ್ ಉಪಹಾರ ಹೋಟೆಲ್ ನಲ್ಲಿ ಪೂರೈಸಿದ್ದ ಪೂರಿ-ಬಾಜಿಯಲ್ಲಿ ಬೆಂದ ಹಲ್ಲಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಹಕರಿಗೆ 90 ಸಾವಿರ ರೂ. ಪರಿಹಾರ ನೀಡಲು ಹೋಟೆಲ್ ಮಾಲೀಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

- Advertisement -

ಸೆಪ್ಟೆಂಬರ್ 2018 ರಂದು ಪೂರಿ ಬಾಜಿಯಲ್ಲಿ ಹಲ್ಲಿ ತಿಂದು ಆರೋಗ್ಯದಲ್ಲಿ ಏರು ಪೇರು ಕಂಡ ಕಂಡುಬಂದ ನಂತರ ವಿನಾಯಕ ಮತ್ತು ಸಹನಾ ಎನ್ನುವ ಇಬ್ಬರು ಗ್ರಾಹಕರು- ಗ್ರಾಹಕ ವೇದಿಕೆಯನ್ನು ಸಂಪರ್ಕಿಸಿದ್ದರು.ಇಬ್ಬರೂ ಗ್ರಾಹಕರಿಗೆ ಒಟ್ಟು 90 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ಸದಸ್ಯರಾದ ಪಿ.ಸಿ.ಹಿರೇಮಠ ಮತ್ತು ವಿ.ಎ. ಬೋಳಶೆಟ್ಟಿ ಅವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.



Join Whatsapp