ಅಗತ್ಯವಿದ್ದರೆ ಮಾತ್ರ ಈಶ್ವರಪ್ಪ ಬಂಧನ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ, ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯ ಬಂದರೆ ಮಾತ್ರ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

- Advertisement -

ಈ ಬಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ  ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ತಾವು ನಿರಪರಾಧಿಯಾಗಿದ್ದು, ಆದಷ್ಟು ಬೇಗನೆ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದಾಗ ಸತ್ಯಾಂಶ ಹೊರಬರಲಿದೆ ಎಂದರು.



Join Whatsapp