ಶಿವಮೊಗ್ಗದಲ್ಲಿ ಕೋಮು ಗಲಭೆಗೆ ಸಂಚು: ಮುಸ್ಲಿಮ್ ಯುವಕನ ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳ ಬಂಧನ

Prasthutha|

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಮ್ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

- Advertisement -


ಹರ್ಷನ ಹತ್ಯೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆದಿತ್ತು. ಈ ವೇಳೆ ಆರೋಪಿ ಜೇಟ್ಲಿ ಎಂಬಾತನನ್ನು ಶಿವಮೊಗ್ಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮುಸ್ಲಿಮ್ ಯುವಕ ಅಸ್ಲಂ ಎಂಬಾತನ ಹತ್ಯೆಗೆ ಸಂಚು ರೂಪಿಸಿರುವುದರ ಬಗ್ಗೆ ಆತ ಮಾಹಿತಿ ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.


ಜೇಟ್ಲಿ ನೀಡಿದ ಮಾಹಿತಿ ಮೇರೆಗೆ 13 ಜನರ ವಿರುದ್ಧ FIR ದಾಖಲಿಸಿಕೊಳ್ಳಲಾಗಿದೆ. ರಾಖಿ, ವಿಶ್ವಾಸ್, ವಾಸನ್, ಕಟ್ಟೆ, ಕೋಟಿ, ಕುಲ್ಡಾ, ಅಪ್ಪು, ಸಚಿನ್ ಸೇರಿದಂತೆ 13 ಜನರ ವಿರುದ್ಧ FIR ದಾಖಲಾಗಿದೆ. FIR ದಾಖಲಿಸಿಕೊಂಡು ಬಹುತೇಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.



Join Whatsapp