ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ ಸಂಘಪರಿವಾರ !

Prasthutha|

ಗದಗ: ಕಾಂಗ್ರೆಸ್ ಕಾರ್ಯಕರ್ತನೋರ್ವನನ್ನು ಸಂಘಪರಿವಾರದ ಕಾರ್ಯಕರ್ತರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಟಗೇರಿಯ ಮಂಜುನಾಥ ನಗರದಲ್ಲಿ ನಿನ್ನೆ ಸಂಜೆ  ನಡೆದಿದೆ.

- Advertisement -

ಗಜೇಂದ್ರಸಿಂಗ್ ಎಂಬಾತನಿಗೆ ಸಂಘಪರಿವಾರದ ಕಾರ್ಯಕರ್ತರು  ಚಾಕು ಇರಿದು ಕೊಲೆ ಮಾಡಿದ್ದಾರೆಂದು ಮೃತನ ತಂದೆ ಕಿಶನ್ ಸಿಂಗ್ ಆರೋಪಿಸಿದ್ದಾರೆ.

ಶಿವರಾಜ್ ಪೂಜಾರ್ ಸಹಚರನೋರ್ವ ಓರ್ವ ಮಹಿಳೆಗೆ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದನು ಎನ್ನಲಾಗಿದೆ. ಹೀಗಾಗಿ, ಗಜೇಂದ್ರಸಿಂಗ್ ಮೆಸೇಜ್ ಮಾಡದಂತೆ ಆ ಯುವಕನಿಗೆ ತಾಕೀತು ಮಾಡಿ ಬುದ್ಧಿ ಮಾತು ಹೇಳಿದ್ದಾನೆ. ಇದೇ ವಿಚಾರಕ್ಕೆ  ಸಣ್ಣಗೆ ಹೊತ್ತಿಕೊಂಡಿದ್ದ ಜಗಳ  ಕೊಲೆಯಲ್ಲಿ ಅಂತ್ಯವಾಗಿದೆ.‌

- Advertisement -

ಶುಕ್ರವಾರ ಮಧ್ಯಾಹ್ನ ಕೆಲಸ‌ ಮುಗಿಸಿ ಮನೆಗೆ ಹೊರಟಿದ್ದ ಗಜೇಂದ್ರ ಸಿಂಗ್​ ನಿಗೆ ರೌಡಿಶೀಟರ್ ಶಿವರಾಜ್ ಪೂಜಾರ್ ಮತ್ತು ಆತನ ಸಹಚರರು ಅಟ್ಯಾಕ್ ಮಾಡಿದ್ದಾರೆ. ಸಿಕ್ಕ ಸಿಕ್ಕಲ್ಲಿ, ಹೊಟ್ಟೆಗೆ ಚಾಕು ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಜೇಂದ್ರನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳಿದಿದ್ದಾರೆ.



Join Whatsapp