ಮಂಗಳೂರು: ಪತಿ ಸಾವು, ಮಗುವನ್ನು ಕೊಂದು ಆತ್ಮಹತ್ಯೆಗೈದ ನೊಂದ ಪತ್ನಿ

Prasthutha|

ಮಂಗಳೂರು:  ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ದಾಟುವ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಟಿಕಾನ ಬಳಿ ಶನಿವಾರ ರಾತ್ರಿ ನಡೆದಿದೆ.

- Advertisement -

ಗಂಗಾಧರ ಬಿ ಕಮ್ಮಾರ (36) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಗಂಡ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಶೃತಿ (30) ತನ್ನ 6 ತಿಂಗಳ ಮಗುವನ್ನು  ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿರುವುದಾಗಿ ತಿಳಿದುಬಂದಿದೆ.



Join Whatsapp