ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್

Prasthutha|

ಬೆಳಗಾವಿ: ಮಾಜಿ ಸಚಿವ ಈಶ್ವರಪ್ಪ ಅವರ 40 % ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ್ ಪಾಟೀಲ್ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.

- Advertisement -

ಸಂತೋಷ್ ಪಾಟೀಲ್ ಅವರು ಸಾವನ್ನಪ್ಪಿದಾಗ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಡಿ. ಕೆ. ಶಿವಕುಮಾರ್ ಅವರು 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ತೆರಳಿ ಪರಿಹಾರ ನೀಡಿದ್ದಾರೆ.

ಇದಲ್ಲದೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರು. ಪರಿಹಾರ ಚೆಕ್ ನೀಡಿದರು.

- Advertisement -

ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್   ಎಸ್  ಕೌಜಲಗಿ,ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



Join Whatsapp