ಈಜಲು ತೆರಳಿದ ಮೂವರು ಬಾಲಕರು ನೀರುಪಾಲು

Prasthutha|

ತುಮಕೂರು : ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ತಿಮ್ಮಲಾಪುರದಲ್ಲಿ ನಡೆದಿದೆ.

- Advertisement -

ಭರತ್ (12), ಆನಂದ್ (10) ಹಾಗೂ ವಿಶ್ವಾಸ್(11) ಮೃತ‌ ದುರ್ದೈವಿಗಳು. ಈಜಲು ಬಾರದೇ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕೆರೆಯ ದಡದಲ್ಲಿ ಬಟ್ಟೆ, ಚಪ್ಪಲಿ ಪತ್ತೆಯಾಗಿರುವುದರಿಂದ ಬಾಲಕರು ನೀರಿನಲ್ಲಿ ಮುಳುಗಿರುವುದು ಗೊತ್ತಾಗಿದೆ. ಮೃತಪಟ್ಟ ಮೂರು ಬಾಲಕರ ಮೃತದೇಹವನ್ನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತುಮಕೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp