ಮಧ್ಯ ಪ್ರದೇಶ | ಕಟ್ಟಡಕ್ಕೆ ಬೆಂಕಿ ತಗುಲಿ ಏಳು ಮಂದಿ ಸಜೀವ ದಹನ

Prasthutha|

ಇಂದೋರ್: ಮಧ್ಯ ಪ್ರದೇಶದ ಇಂದೋರ್ ಎಂಬಲ್ಲಿನ ವಿಜಯ್ ನಗರದ ಎರಡು ಅಂತಸ್ತಿನ ವಸತಿ ಕಟ್ಟಡದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ಏಳು ಜನರು ಸಜೀವವಾಗಿ ದಹನವಾಗಿದ್ದಾರೆ. ಇದುವರೆಗೂ ಸುಮಾರು 11 ಮಂದಿಯನ್ನು ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

- Advertisement -

ಹೆಚ್ಚಿನ ಸಾವುಗಳು ಉಸಿರುಗಟ್ಟುವಿಕೆಯಿಂದ ನಡೆದಿದೆ ಎಂದು ಹೇಳಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ನಡೆದಿದ್ದು, ವಸತಿ ಸಂಕೀರ್ಣದ ಪಾರ್ಕಿಂಗ್ ನಲ್ಲಿ ವಾಹನಗಳಿಗೆ ಬೆಂಕಿ ತಗುಲಿದೆ ಎಂದು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಹಝೀಬ್ ಖಾಝಿ ತಿಳಿಸಿದ್ದಾರೆ.
ಬೆಂಕಿ ನಿಯಂತ್ರಣಕ್ಕೆ ತರಲು ಸುಮಾರು 3 ಗಂಟೆ ಪರಿಶ್ರಮ ಬೇಕಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಎಂದು ತಿಳಿಸಿದ್ದಾರೆ.

- Advertisement -

ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಖಾಝಿ ತಿಳಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾದ್ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ತನಿಖೆ ಆದೇಶಿಸಿದ್ದಾರೆ ಮತ್ತು ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದ್ದಾರೆ.



Join Whatsapp