ಮಂಗಳೂರಿನಲ್ಲಿ ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುತ್ತಾರೆ : ಎ. ನಾರಾಯಣಸ್ವಾಮಿ

Prasthutha|

- Advertisement -

ಚಾಮರಾಜನಗರ: ಕರ್ನಾಟಕದ ಕರಾವಳಿ ಮಂಗಳೂರಿನಲ್ಲಿ ಹಲವು ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ಡಿಫೆನ್ಸ್ ಫೋರ್ಸ್ (ಎಂಡಿಎಫ್) ಎಂಬ ಸಂಘಟನೆ ಬಗ್ಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು , ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಸಂಘಟನೆಗಳು ಹುಟ್ಟಿಕೊಳ್ಳಲಿ, ಅವರನ್ನು ಸದೆಬಡಿಯುತ್ತೇವೆ ಯಾವುದೇ ಕಾರಣಕ್ಕೂ ಅವರನ್ನು ಬಿಡುವುದಿಲ್ಲ ಎಂದರು.

- Advertisement -

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಗೌರವ, ಸಾರ್ವಭೌಮತೆಗೆ ಕುಂದು ತರುವ ಸಂಸ್ಥೆಗಳನ್ನು ಬಿಡುತ್ತಿಲ್ಲ. ಯಾವುದನ್ನು ಯಾವ ಕಾಲಘಟ್ಟದಲ್ಲಿ ಬ್ಯಾನ್ ಮಾಡಬೇಕೋ, ಆವಾಗ ಮಾಡುತ್ತೇವೆ ಎಂದು ತಿಳಿಸಿದರು



Join Whatsapp