ಕಾರು, ಟಿಟಿ ವಾಹನ ಅಪಘಾತ: ಇಬ್ಬರು ಮೃತ್ಯು

Prasthutha|

ತುಮಕೂರು: ಕಾರು ಹಾಗೂ ಟಿಟಿ ವಾಹನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ನಡೆದಿದೆ.

- Advertisement -


ಬೆಂಗಳೂರು ಮೂಲದ ರಘು(27), ಸಂತೋಷ(21) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ವಾಪಸ್ ಹೋಗುತಿದ್ದರು. ಈ ವೇಳೆ ಕಾರು ಡಿವೈಡರ್ ದಾಟಿ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಐವರಿಗೆ ಗಾಯವಾಗಿದೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp