ಪಿಎಸ್ ಐ ಅಕ್ರಮ; ಆರೋಪಿ ರುದ್ರಗೌಡ ಪಾಟೀಲ್’ಗೆ ಪೊಲೀಸ್ ಡ್ರಿಲ್

Prasthutha|

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಿರಿಯ ಹಾಗೂ ಸಹಾಯಕ ಇಂಜಿನಿಯರ್ ಹುದ್ದೆಗಳೂ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ರುದ್ರಗೌಡ ಪಾಟೀಲ್ ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು‌ ಕಲಬುರಗಿಯಿಂದ ನಗರಕ್ಕೆ ಕರೆತಂದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

- Advertisement -


ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ರುದ್ರಗೌಡ ಪಾಟೀಲ್ ಸಿಐಡಿ‌ ಅಧಿಕಾರಿಗಳ ವಿಚಾರಣೆ ವೇಳೆ ಲೋಕೋಪಯೋಗಿ ಇಲಾಖೆಯ ಕಿರಿಯ ಹಾಗೂ ಸಹಾಯಕ ಇಂಜಿನಿಯರ್ ಹುದ್ದೆಗಳೂ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದನ್ನು ಬಾಯ್ಬಿಟ್ಟಿದ್ದ. ಲೋಕೋಪಯೋಗಿ ಇಲಾಖೆಯ ಕಿರಿಯ ಹಾಗೂ ಸಹಾಯಕ ಇಂಜಿನಿಯರ್ ಹುದ್ದೆಗಳೂ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಅಕ್ರಮದ ಸಂಬಂಧ ಸೇಂಟ್​ಜಾನ್ಸ್ ಶಾಲೆಯ ಸಿಬ್ಬಂದಿ ಕಳೆದ ಡಿಸೆಂಬರ್ 14ರಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು.


ಪಿಡಬ್ಲ್ಯುಡಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ರುದ್ರಗೌಡ 7ನೇ ಆರೋಪಿಯಾಗಿದ್ದು ಬಾಡಿ ವಾರೆಂಟ್ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು‌ ವಶಕ್ಕೆ ಪಡೆದು ನಗರಕ್ಕೆ ಕರೆತಂದು ವಿಚಾರಣೆ ಕೈಗೊಂಡಿದ್ದಾರೆ. ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ರುದ್ರಗೌಡ ಪಾಟೀಲ್ ಈ ಹಿಂದೆ ನಡೆದಿದ್ದ ಪಿಡಬ್ಲ್ಯುಡಿ ನೇಮಕಾತಿ ಅಕ್ರಮದಲ್ಲಿಯೂ ಮುಖ್ಯ ಪಾತ್ರ ವಹಿಸಿದ್ದ ಮಾಹಿತಿಯನ್ನು ಆಧರಿಸಿ ವಿಚಾರಣೆ ನಡೆಸಲಾಗಿದೆ.



Join Whatsapp