ಬಂಟ್ವಾಳ: ಅಪ್ರಾಪ್ತ ಬಾಲಕನ ಮೇಲೆ ಸಂಘಪರಿವಾರದಿಂದ ಹಲ್ಲೆ

Prasthutha|

ಬಂಟ್ವಾಳ: ರಾತ್ರಿ ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ  ಮಾಡಿದ ಘಟನೆ ಮಾರಿಪಳ್ಳದ ಕಡೆಗೋಳಿ ಬಳಿ ನಡೆದಿದೆ.

- Advertisement -

ತುಂಬೆ ರೊಟ್ಟಿಗುಡ್ಡೆ ನಿವಾಸಿ ನಫೀಸ್ (17) ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ.

ನಫೀಸ್ ಕಳೆದ ರಾತ್ರಿ ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಕಡೆಗೋಳಿ ಬಳಿ ತಲುಪಿದಾಗ ಮೊಬೈಲ್ ರಿಂಗಣಿಸಿದೆ. ಈ ವೇಳೆ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದಾಗ ಸಂಘಪರಿವಾರದ ಮೂವರು ಕಾರ್ಯಕರ್ತರು ಆಗಮಿಸಿ ಏಕಾಏಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನಫೀಸ್ ನನ್ನು ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

 ಬಂಟ್ವಾಳ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಆಗಮಿಸಿ ಯುವಕನಿಂದ ಹೇಳಿಕೆ ಪಡೆದಿದ್ದು ಪ್ರಕರಣ ದಾಖಲಿಸುವ ಭರವಸೆ ನೀಡಿದ್ದಾರೆ.



Join Whatsapp