ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ಟಿಕೆಟ್ ನೀಡಿದ ಬಿಜೆಪಿ

Prasthutha|

ಬೆಂಗಳೂರು: ರಾಜ್ಯದಿಂದ ರಾಜ್ಯಸಭೆಗೆ ಮತ್ತೊಮ್ಮೆ ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಜಿಎಸ್ ಟಿ ಪರಿಹಾರ ಹಣವನ್ನು ಕರ್ನಾಟಕಕ್ಕೆ ನೀಡದಂತೆ ಶಿಫಾರಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಗೆ ರಾಜ್ಯದಿಂದ ಟಿಕೆಟ್ ನೀಡಬಾರದು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಅನ್ಯಾಯವೆಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

- Advertisement -

 ನಟ ಜಗ್ಗೇಶ್ ಗೂ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಇದೇ ಮೊದಲ ಬಾರಿ ಜಗ್ಗೇಶ್ ರಾಜ್ಯಸಭೆ ಪ್ರವೇಶಿಸಲಿದ್ದಾರೆ.

ನಿರ್ಮಲ್ ಕುಮಾರ್ ಸುರಾನಾ, ಲೆಹರ್ ಸಿಂಗ್, ಕೆ.ಸಿ.ರಾಮಮೂರ್ತಿ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿಲ್ಲ. ವಿವಿಧ ರಾಜ್ಯಗಳಿಂದ ಖಾಲಿ ಆಗಲಿರುವ ಒಟ್ಟು 16 ಸ್ಥಾನಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.



Join Whatsapp