ಕಾಶ್ಮೀರ ಪಂಡಿತರ ಹತ್ಯೆಯ ನೈತಿಕ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ: ಸುಬ್ರಮಣಿಯನ್ ಸ್ವಾಮಿ ಆಗ್ರಹ

Prasthutha|

ನವದೆಹಲಿ: ಜಮ್ಮು, ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಹೊರತಾಗಿಯೂ ಕಾಶ್ಮೀರ ಪಂಡಿತರ ಹತ್ಯೆ ಆಗುತ್ತಿರುವುದರಿಂದ ಇದರ ನೈತಿಕ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ ಎಂದು ರಾಜ್ಯಸಭೆ ಸಂಸದ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

- Advertisement -

ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಇರುವುದರ ಹೊರತಾಗಿ ಪ್ರತಿದಿನ ಕಾಶ್ಮೀರಿ ಹಿಂದೂಗಳನ್ನು ಗುಂಡಿಕ್ಕಿ ಹತ್ಯೆ ನಡೆಸಲಾಗುತ್ತಿರುವುದರಿಂದ ಅಮಿತ್ ಶಾ ಅವರ ರಾಜೀನಾಮೆಯನ್ನು ಕೇಳುವುದು ಅನಿವಾರ್ಯವಾಗಿದೆ. ಇಂದಿನ ದಿನಗಳಲ್ಲಿ ಕ್ರಿಕೆಟ್ ಅನಗತ್ಯ ಆಸಕ್ತಿಯನ್ನು ಪಡೆಯುತ್ತಿರುವುದರಿಂದ ಅವರಿಗೆ ಕ್ರೀಡಾ ಸಚಿವಾಲಯವನ್ನು ನೀಡಬಹುದು ಎಂದು ಲೇವಡಿ ಮಾಡಿದ್ದಾರೆ.



Join Whatsapp