ಆರೆಸ್ಸೆಸ್ ಚಡ್ಡಿ ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು : ರಘುಪತಿ ಭಟ್

Prasthutha|

ಉಡುಪಿ: ಆರೆಸ್ಸೆಸ್ ಚಡ್ಡಿಯನ್ನು ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು. ಈಗ ನಮ್ಮ ವೇಶ ಅಂಗಿ ಪ್ಯಾಂಟ್ ಆಗಿದೆ. ಸಿದ್ದರಾಮಯ್ಯ ರಾಜಕೀಯ ಕಾರಣಕ್ಕೆ ಹೀಗೆ ಮಾತನಾಡುತ್ತಾರೆ. ಆ ಚಡ್ಡಿ ಇದ್ದದ್ದರಿಂದ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. ಆರೆಸ್ಸೆಸ್ ಇಲ್ಲದೇ ಇರುತ್ತಿದ್ದರೆ ದೇಶದ ಪರಿಸ್ಥಿತಿ ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು .

- Advertisement -

ಆರೆಸ್ಸೆಸ್ ಚಡ್ಡಿ ಅಭಿಯಾನಕ್ಕೆ ಕರೆ ಕೊಟ್ಟಿರುವ ಸಿದ್ದರಾಮಯ್ಯ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ದೇಶಭಕ್ತರ ತಯಾರು ಮಾಡುವ ಸಂಸ್ಥೆ ಆರೆಸ್ಸೆಸ್ ರಾಷ್ಟ್ರೀಯತೆ ಮತ್ತು ಒಳ್ಳೆಯ ಶಿಕ್ಷಣ ಕೊಡುತ್ತಿರುವುದೇ ಆರೆಸ್ಸೆಸ್. ಆರೆಸ್ಸೆಸ್ ಇರುವುದರಿಂದ ಸಿದ್ದರಾಮಯ್ಯನ ಬೇಳೆ ಬೆಳೆಯುತ್ತಿಲ್ಲ. ಆರೆಸ್ಸೆಸ್ ಏನು ಎಂಬುದು ಇಡೀ ವಿಶ್ವಕ್ಕೇ ಗೊತ್ತು ಎಂದರು.

ಎಲ್ಲಾ ಮಸೀದಿಗಳಲ್ಲಿ ಶಿವಲಿಂಗ ಹುಡುಕಬೇಡಿ ಎಂದು ಕರೆಕೊಟ್ಟಿರುವ ಮೋಹನ್ ಭಾಗವತ್ ಹೇಳಿದ್ದನ್ನ ಖಂಡಿತವಾಗಿ ಎಲ್ಲರೂ ಕೇಳುತ್ತಾರೆ. ಎಲ್ಲಾ ಮಸೀದಿಗಳನ್ನು ಹುಡುಕಲು ಹೋಗಬೇಡಿ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಈಗ ಇರುವುದನ್ನು ಸರಿ ಮಾಡಿಕೊಳ್ಳೋಣ ಎಂಬುದು ಅದರ ಅರ್ಥ ಕೆಲವು ಕುರುಹುಗಳು ಸಿಕ್ಕಾಗ ಭಾವನೆಗೆ ದಕ್ಕೆ ಆಗುತ್ತದೆ . ನಮ್ಮ ಮೂಲಸ್ಥಾನಕ್ಕಾಗಿ ಹುಡುಕಿಕೊಂಡು ಹೋಗಿ ಜೀರ್ಣೋದ್ಧಾರ ಮಾಡುತ್ತೇವೆ ಎಂದಿದ್ದಾರೆ.



Join Whatsapp