ಸುಳ್ಯ: ಯುವಕನ ಮೇಲೆ ಗುಂಡಿನ ದಾಳಿ !

Prasthutha|

ಸುಳ್ಯ: ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಸುಳ್ಯ ಪೇಟೆ ಬಳಿ ತಡರಾತ್ರಿ ನಡೆದಿದೆ.
ಸುಳ್ಯ ಕಸಬಾ ಗ್ರಾಮದ ಜಯನಗರ ನಿವಾಸಿ ಮುಹಮ್ಮದ್ ಶಾಹಿ ಗುಂಡಿನ ದಾಳಿಗೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಹಮ್ಮದ್ ಸಾಯಿ ಅವರು ಸುಳ್ಯದ ಜ್ಯೋತಿ ಸರ್ಕಲ್ ಸಮೀಪ ವೆಂಕಟರಮಣ ಸೊಸೈಟಿ ಬಳಿ ತನ್ನ ಕ್ರೆಟಾ ಕಾರನ್ನು ನಿಲ್ಲಿಸಿ ಪಕ್ಕದಲ್ಲಿರುವ ತನ್ನ ತಂಗಿಯ ಮನೆಗೆ ಹೋಗಿ ವಾಪಸ್ಸು ಕಾರಿನ ಬಳಿ ಬರುತ್ತಿದ್ದಂತೆ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಸ್ಕಾರ್ಪಿಯೋದಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಸಾಯಿಯವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ ಎಂದು ದೂರಲಾಗಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp