ಬಿಜೆಪಿ ಕಳುಹಿಸುವ ಚಡ್ಡಿಗಳನ್ನು ಪ್ರಧಾನಿ ಮೋದಿಗೆ ರವಾನಿಸಲಾಗುವುದು: ಪ್ರಿಯಾಂಕ್ ಖರ್ಗೆ

Prasthutha|

ಮೈಸೂರು: ಬಿಜೆಪಿ ಪಕ್ಷದವರು ಕೆಪಿಸಿಸಿ ಕಚೇರಿಗೆ ಕಳುಹಿಸುವ ಚಡ್ಡಿಗಳನ್ನು ನೇರವಾಗಿ ಪ್ರಧಾನಿ ಮೋದಿ ಅವರಿಗೆ ರವಾನಿಸಲಾಗುವುದೆಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

ಸದ್ಯ ಬಿಜೆಪಿಯವರು ನಡೆಸುತ್ತಿರುವ ಚಡ್ಡಿ ಸಂಗ್ರಹ ಅಭಿಯಾನವನ್ನು ಬೀದರ್’ನಿಂದ ಚಾಮರಾಜನಗರವರೆಗೂ ಮುಂದುವರಿಸಲಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಮುಖಂಡರೆಲ್ಲರೂ ಈ ಅಭಿಯಾನದ ಭಾಗವಾಗಲಿ. ಜನರೇ ಅವರ ಮುಖಕ್ಕೆ ಉಗಿಯುತ್ತಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರೆಸ್ಸೆಸ್’ನ ಚಡ್ಡಿ ಕುರಿತು ನಾವು ಮಾತನಾಡಿದರೆ ಬಿಜೆಪಿ ಅವರ ಬುಡಕ್ಕೇಕೆ ಬೆಂಕಿ ಬಿದ್ದಿದೆ. ಅವರೇಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

Join Whatsapp