ಕಾಂಗ್ರೆಸ್ಸಿನ ಮುಸ್ಲಿಂ ಅಭ್ಯರ್ಥಿ ಸೋಲಲು ಸಿದ್ದರಾಮಯ್ಯ ನೇರ ಕಾರಣ: ಮಾಜಿ ಸಚಿವ ಈಶ್ವರಪ್ಪ

Prasthutha|

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಅಭ್ಯರ್ಥಿ ಸೋಲಲು ಮತ್ತು ಬಿಜೆಪಿಯ ಮೂರನೇ ಅಭ್ಯರ್ಥಿ ಲಹರ್‌ ಸಿಂಗ್ ಗೆಲ್ಲಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ನೇರ ಕಾರಣ’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ನಮ್ಮ ಗೆಲುವಿಗೆ ಕಾರಣರಾದ ಸಿದ್ದರಾಮಯ್ಯ ಅಭಿನಂದನೆಗಳು ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

- Advertisement -

ವೀರಶೈವ ಮತ್ತು ಲಿಂಗಾಯತ ಸಮುದಾಯದವರನ್ನು ಸಿದ್ದರಾಮಯ್ಯ ಒಡೆದಿದ್ದಾರೆ. ಅವರು ಯಾರ ಪರ ಇರುತ್ತಾರೆ ಎನ್ನುವುದೇ ಗೊತ್ತಾಗುವುದಿಲ್ಲ. ಕಾಂಗ್ರೆಸ್‌ನ ಮುಸ್ಲಿಂ ಅಭ್ಯರ್ಥಿ ಮನ್ಸೂರ್ ಅವರ ಸೋಲಿಗೆ ಕಾರಣರಾದ ಸಿದ್ದರಾಮಯ್ಯ ಮುಸ್ಲಿಂ ಸಮುದಾಯಕ್ಕೆ ದ್ರೋಹ ಬಗೆದಿರುವುದನ್ನು ಆ ಸಮುದಾಯ ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.



Join Whatsapp