ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್ ಶಾಸಕರ ಹೆಸರಲ್ಲಿ ‘ಸಮಾರಾಧನೆ’ ಮಾಡಿದ ಕಾರ್ಯಕರ್ತರು !

Prasthutha|

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಜೆಡಿಎಸ್ ನ ಇಬ್ಬರು ಶಾಸಕರ ಫೋಟೊ ಹಾಕಿ ‘ಕೈಲಾಸ ಸಮಾರಾಧನೆ’ ಪತ್ರ ತಯಾರಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

- Advertisement -

ಕೋಲಾರದ ಶಾಸಕ ಕೆ.ಶ್ರೀನಿವಾಸ ಗೌಡ ಮತ್ತು ಗುಬ್ಬಿ ಕ್ಷೇತ್ರದ ಶಾಸಕ ಎಸ್. ಆರ್. ಶ್ರೀನಿವಾಸ ಅವರು ಕೋಮುವಾದಿ ಪಕ್ಷವನ್ನು ಗೆಲ್ಲಿಸಲು ಜೆಡಿಎಸ್ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಮೋಸ ಮಾಡಿ ದುಡ್ಡಿಗಾಗಿ ತಮ್ಮ ಮತವನ್ನು ಮಾರಿಕೊಂಡಿದ್ದಾರೆ. ಮತದಾರರ ಪಾಲಿಗೆ ತೀರಿಕೊಂಡಿದ್ದಾರೆ ಎಂದು ಆರೋಪಿಸಿ ‘ಕುಮಾರಸ್ವಾಮಿ ಫಾರ್ ಸಿಎಂ’ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಗಳನ್ನು ಹಾಕಲಾಗಿದೆ.
ಈ ಪೋಸ್ಟ್ ಗಳನ್ನು ಸಾವಿರಾರು ಮಂದಿ ತಮ್ಮ ಖಾತೆಗಳಲ್ಲಿಯೂ ಹಂಚಿಕೊಂಡಿದ್ದಾರೆ.



Join Whatsapp