ಕರಾವಳಿ ಸೇರಿ ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್‌ ಘೋಷಣೆ

Prasthutha|

ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಜೂ. 20ರಿಂದ 24ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ ಪ್ರದೇಶದಲ್ಲಿ ದುರ್ಬಲವಾಗಿದೆ. ಬೆಳಗಾವಿ, ಬೆಂಗಳೂರು, ಬೀದರ್‌, ಹಾಸನ ಸಹಿತ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಸೋಮವಾರದಿಂದ 5 ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.



Join Whatsapp