ಸೀತಾಂಗೋಳಿ ಸಿದ್ದೀಕ್ ಕೊಲೆ ಪ್ರಕರಣ: ಮತ್ತೆ ಮೂವರ ಬಂಧನ

Prasthutha|

ಕಾಸರಗೋಡು: ಗಲ್ಫ್’ನಲ್ಲಿ ಉದ್ಯೋಗಿ ಆಗಿರುವ ಸೀತಾಂಗೋಳಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬಾತನ ಕೊಲೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತೆ ಮೂವರನ್ನು ಬಂಧಿಸಿದ್ದು, ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಐದಕ್ಕೇರಿದಂತಾಗಿದೆ.

- Advertisement -

ಬಂಧಿತರನ್ನು ಮಂಜೇಶ್ವರ ಸಮೀಪದ ಉದ್ಯಾವರ ನಿವಾಸಿ ರಿಯಾಝ್ ಹಸನ್, ಉಪ್ಪಳ ಬಿ.ಟಿ. ರಸ್ತೆಯ ಅಬ್ದುಲ್ ರಝಾಕ್ ಮತ್ತು ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ. ಮಂಜೇಶ್ವರದ ಅಬ್ದುಲ್ ರಹೀಮ್ ಮತ್ತು ಅಬ್ದುಲ್ ಅಝೀಝ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು.

ಜೂನ್ 29 ರಂದು ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ತಂಡವೊಂದು ಅಪಹರಿಸಿ ಪೈವಳಿಕೆಯ ಮನೆಯೊಂದರಲ್ಲಿರಿಸಿ ಥಳಿಸಿ ಹತ್ಯೆ ನಡೆಸಿತ್ತು. ಇದಾದ ಬಳಿಕ ಕಾರಿನಲ್ಲಿ ಬಂದ್ಯೋಡಿನ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಬಿಟ್ಟು ಪರಾರಿಯಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರೆ ಐದಕ್ಕೂ ಅಧಿಕ ಮಂದಿ ತಲೆಮರೆಸಿಕೊಂಡಿದ್ದು, ಇನ್ನಷ್ಟು ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.



Join Whatsapp