ಮಂಗಳೂರು | ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ !

Prasthutha|

ಮಂಗಳೂರು: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಕೂಳೂರಿನ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.

- Advertisement -

ಕಾವೂರು ನಿವಾಸಿ ಚೇತನ್ ಕುಮಾರ್(28) ಮೃತಪಟ್ಟವರು  ಎಂದು ಗುರುತಿಸಲಾಗಿದೆ.

ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಕೂಳೂರು ಸೇತುವೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಶವವನ್ನು ನಾಪತ್ತೆಯಾಗಿದ್ದ ಚೇತನ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಯೋ ಅಥವಾ ಕೊಲೆಯಾಗಿರಬಹುದೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಇನ್ನಷ್ಟೇ ಮಾಹಿತಿ ಹೊರಬರಬೇಕಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Join Whatsapp