PSI ನೇಮಕಾತಿ ಹಗರಣದಲ್ಲಿ ADGP ಬಂಧನ: ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ ಎಂದ ಸಿದ್ದರಾಮಯ್ಯ

Prasthutha|

ಬೆಂಗಳೂರು: ಶಿವಮೊಗ್ಗದ ಅನವಟ್ಟಿಯಲ್ಲಿ ಕನ್ನಡ ನಾಟಕ ‘ಜತೆಗಿರುವನು ಚಂದಿರ’ ಪ್ರದರ್ಶನಕ್ಕೆ ಆರೆಸ್ಸೆಸ್ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ. ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ, ನಾಟಕ ಕಲೆ ಮೊದಲಾದ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ-ಆತಂಕಗಳನ್ನು ಎದುರಿಸುವ ಚೈತನ್ಯ ಕನ್ನಡದ ಸಾಂಸ್ಕೃತಿಕ ಲೋಕಕ್ಕೆ ಇದೆ ಎಂದು ಕುಟುಕಿದ್ದಾರೆ.

ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಮುಖ್ಯಮಂತ್ರಿಯವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.



Join Whatsapp