‘ಕಷ್ಟಪಟ್ಟು ಬಿಜೆಪಿಯನ್ನು ಅಧಿಕಾರಕ್ಕೇರಿಸಿದಕ್ಕೆ ಪಶ್ಚಾತ್ತಾಪವಾಗುತ್ತಿದೆ’: ಪ್ರಮೋದ್ ಮುತಾಲಿಕ್

Prasthutha|

ಹೊಸಪೇಟೆ: ಕಷ್ಟಪಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತಂದಿದಕ್ಕೆ ಪಶ್ಚಾತ್ತಾಪವಾಗುತ್ತಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ದಾರಿ ತಪ್ಪಿದೆ. ಹಿಂದೂಗಳಿಗೆ ಅನ್ಯಾಯವಾದರೂ ಮೌನವಹಿಸಿದೆ. ಹಿಂದೂಗಳ ಪಕ್ಷ ಅಂದುಕೊಂಡು ಆ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತರಲು ಶ್ರಮಿಸಿದ್ದೆವು. ನ್ಯಾಯ ಕೇಳಲು ಹೋದ ಶಿವಮೊಗ್ಗದ ಹರ್ಷ ಸಹೋದರಿ ಮತ್ತು ತಾಯಿಯೊಂದಿಗೆ ಗೃಹ ಸಚಿವರು ವರ್ತಿಸಿದ ರೀತಿ ಸರಿಯಿಲ್ಲ. ಅದೇ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವವರಿಗೆ ಬಿರಿಯಾಣಿ ಕೊಟ್ಟು ಸಾಕುತ್ತಿದ್ದಾರೆ ಎಂದು ಆಪಾದಿಸಿದರು.


ಜಾನುವಾರು ಹತ್ಯೆ ಮತ್ತು ಪ್ರತಿಬಂಧಕ ಕಾಯ್ದೆ ವರ್ಷದ ಹಿಂದೆ ಜಾರಿಯಾಗಿದೆ. ಮತಾಂತರ ಕಾಯ್ದೆ ಆರು ತಿಂಗಳ ಹಿಂದೆ ಜಾರಿಯಾಗಿದೆ. ಆದರೆ ಗೋಹತ್ಯೆ, ಮತಾಂತರ ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದರು.



Join Whatsapp