ದಲಿತ ನಾಯಕ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ: ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

Prasthutha|

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಹಿರಿಯ ದಲಿತ ನಾಯಕ, ಚಿಂತಕ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕುಟುಂಬಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಮೃತದೇಹವನ್ನು ಸೋಮವಾರ ಸ್ಮಶಾನದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

- Advertisement -

ಬೆಳ್ತಂಗಡಿ ಸಹಾಯಕ ಆಯುಕ್ತರು, ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು, ವೈದ್ಯರು ಪದ್ಮುಂಜ ಪೊಯ್ಯದ ಅವರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದರು. ಬಳಿಕ ಮೃತದೇಹವನ್ನು ಹೊರಗೆ ತೆಗೆಯಲಾಯಿತು. ಬೆಳ್ತಂಗಡಿ ತಹಶೀಲ್ದಾರ್, ಹಿರಿಯ ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡೀಕಯ್ಯ ಅವರು ಜುಲೈ 8ರಂದು ನಿಧನರಾಗಿದ್ದರು. ಆದರೆ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಡೀಕಯ್ಯ ಅವರ ಕುಟುಂಬಸ್ಥರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಗೋರಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಮಂಚದಿಂದ ಬಿದ್ದ ಡೀಕಯ್ಯರ ತಲೆಯಿಂದ ಅಷ್ಟೊಂದು ನೆತ್ತರು ಹೇಗೆ ಹೋಯಿತು ಹಾಗೂ ಮಣಿಪಾಲದಲ್ಲಿ ಸಾವಿನ ಘೋಷಣೆ ಮಾಡುವವರೆಗೆ ದೇಹವನ್ನು ಡೀಕಯ್ಯರ ಮಿತ್ರರಿಗಾಗಲಿ, ಹತ್ತಿರದವರಿಗಾಗಲಿ ತೋರಿಸಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.



Join Whatsapp