ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ: ಡಿ.ಕೆ. ಶಿವಕುಮಾರ್

Prasthutha|

ಮೈಸೂರು: ‘ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ. ಕೃಷ್ಣ ಅವರ ನಂತರ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.

 ‘ಕೇವಲ ಒಂದು ಸಮುದಾಯವಲ್ಲ, ರಾಜ್ಯದ ಎಲ್ಲ ಸಮುದಾಯಗಳು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ನಾವು ಜಾತ್ಯಾತೀತ ತತ್ವದಲ್ಲಿ ನಡೆದುಕೊಂಡು ಬಂದಿದ್ದು, ಒಂದು ಜಾತಿ ಹಾಗೂ ಧರ್ಮಕ್ಕೆ ನಾಯಕನಲ್ಲ. ಕಾಂಗ್ರೆಸ್ ನಾಯಕ ಎಂದು ಅವರಿಗೆ ಮನವಿ ಮಾಡಿದ್ದೇನೆ.’ ಎಂದರು.



Join Whatsapp